Latest

ಬಿಜೆಪಿ ಮುಖಂಡನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಪ್ರಗತಿವಾಹಿನಿ ಸುದ್ದಿ; ಲಖನೌ: ಬಿಜೆಪಿ ಮುಖಂಡ ಅಜಯ್ ಶರ್ಮಾ ಮೇಲೆ ಗುಂಡಿನ ದಾಳಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಸ್ವರೂಪ್ ರಾಣಿ ನೆಹರೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಜಯ್ ಶರ್ಮಾ ತಮ್ಮ ನಿವಾಸ ಪ್ರಯಾಗ್ ರಾಜ್ ನಲ್ಲಿದ್ದಾಗಲೇ ದುಷ್ಕರ್ಮಿಗಳು ಅವರ ಮೇಲೆ 5 ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ಅಜಯ್ ಶರ್ಮಾ ಅವರ ಹೊಟ್ಟೆ ಹಾಗೂ ತೋಳುಗಳಿಗೆ ಗುಂಡೇಟು ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಜಯ್ ಶರ್ಮಾ ಬಿಜೆಪಿ ಜಿಲ್ಲಾ ಕಿಸಾನ್ ಮೋರ್ಚಾದ ಉಪಾಧ್ಯಕ್ಷರಾಗಿದ್ದು, ಲೆಹ್ರಾ ಗ್ರಾಮದಲ್ಲಿ ತಮ್ಮ ಕುಟುಂಬದ ಜೊತೆ ವಾಸವಾಗಿದ್ದರು. ಕೆಲಸದ ನಿಮಿತ್ತ ಹೊರ ಹೋಗಿದ್ದರು. ಈ ವೇಳೆ 6 ಜನರ ದುಷ್ಕರ್ಮಿಗಳ ತಂಡ ಅವರ ಮೇಲೆ ದಾಳಿ ನಡೆಸಲು ಯತ್ನಿಸಿದೆ. ತಪ್ಪಿಸಿಕೊಂಡು ವಾಪಸ್ ಮನೆಗೆ ಬಂದರೂ ಬಿಡದ ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ದುರಂತ; ನಾಲ್ವರು ಮಕ್ಕಳು ದಾರುಣ ಸಾವು

Home add -Advt

Related Articles

Back to top button