Latest

ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ನಿವಾಸದಲ್ಲಿ ನಡೆದಿದೆ.

ಅನಂತರಾಜು (46) ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ನಾಯಕ. ಹೆರೋಹಳ್ಳಿ ವಾರ್ಡ್ ನ ಬಿಜೆಪಿ ಮುಖಂಡರಾಗಿದ್ದ ಅನಂತರಾಜು ಸಚಿವ ಎಸ್.ಟಿ.ಸೋಮಶೇಖರ ಅವರ ಪಿಎ ಆಗಿಯೂ ಕೆಲಸ ಮಾಡಿದ್ದರು ಎನ್ನಲಾಗಿದೆ.

Related Articles

ಈ ಬಾರಿ ಬಿಬಿಎಂಪಿಚುನಾವಣೆಗೆ ಸ್ಪರ್ಧಿಸಲು ಅನಂತರಾಜು ಸಿದ್ಧತೆ ನಡೆಸಿದ್ದರು. ಆದರೆ ಇದೀಗ ಅನಂತರಾಜು ಬ್ಯಾಡರಹಳ್ಳಿಯ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಪನ್ಯಾಸಕರ ಭೀಕರ ಹತ್ಯೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button