Kannada NewsKarnataka NewsLatestPolitics

*ರಸ್ತೆ ನಿರ್ಮಾಣ: ಭೂಮಿ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಣ್ಣೂರು ಗ್ರಾಮದಲ್ಲಿ ಸುಮಾರು 1 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

Home add -Advt


ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಈ ರಸ್ತೆ ನಿರ್ಮಾಣಕ್ಕಾಗಿ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಪ್ರಯತ್ನ ಮಾಡಿ ಅನುದಾನ ಮಂಜೂರು ಮಾಡಿಸಿದ್ದಾರೆ. ಪ್ರತಿಯೊಂದು ಗ್ರಾಮಗಳ ಅಭಿವೃದ್ದಿ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣತೊಟ್ಟಿದ್ದೇನೆ. ವರ್ಷದ 365 ದಿನವೂ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಜನಪ್ರತಿನಿಧಿಯಾದವರು ಮನಸ್ಸು ಮಾಡಿದರೆ ಯಾವರೀತಿಯಲ್ಲಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಬಹುದು ಎನ್ನುವುದನ್ನು ತೋರಿಸುತ್ತಿದ್ದೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕಾಡಾ ಅಧ್ಯಕ್ಷರಾದ ಯುವರಾಜ ಕದಂ, ಎಸ್.ಎಲ್.ಚೌಗಲೆ, ಅಶೋಕ ಚೌಗಲೆ, ಮುಕುಂದ ತೆರಳೆ, ಜಯವಂತ ಬಾಳಕುಂದ್ರಿ, ದತ್ತು ಚೌಗಲೆ, ಜ್ಯೋತಿಬಾ ಚೌಗಲೆ, ಪುಂಡಲೀಕ ಬಾಂದುರಗಿ, ಲಲಿತಾ ನಾಯ್ಕ, ಬಾಗಣ್ಣ ನರೋಟಿ, ಸುಚೇತಾ ಸಾಂಬ್ರೇಕರ, ರಾಮು ಚೌಗಲೆ, ಕೇದಾರಿ ಚೌಗಲೆ, ಗ್ರಾಮ ಪಂಚಾಯತಿ ಎಲ್ಲ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related Articles

Back to top button