Karnataka News
*ರಾಜ್ಯದ ಈ ಜಿಲ್ಲೆಗಳಲ್ಲಿ ಮೈ ಕೊರೆವ ಚಳಿ ಜೊತೆಗೆ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮೈ ಕೊರೆವ ಚಳಿ ಆರಂಭವಾಗಿದೆ. ಈ ನಡುವೆ ನವೆಂಬರ್ 27 ರಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಚಳಿಯೊಂದಿಗೆ ಮಳೆಯೂ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೊಡಗು, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗ, ಶಿವಮೊಗ್ಗ ಜಿಲ್ಲೆಗಳಲಿ ಚಳಿ ಪ್ರಮಾಣ ಹೆಚ್ಚುವುದರ ಜೊತೆಗೆ ಮಳೆಯಾಗಲಿದೆ.
ರಾಜ್ಯದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.



