Karnataka NewsPolitics

*ಬಿಜೆಪಿಗೆ ಶಾಕ್ ಕೊಟ್ಟ ಜೆಡಿಎಸ್*

ಮೈಸೂರು ಭಾಗದ ಕಮಲನಾಯಕ ಜೆಡಿಎಸ್ ತೆಕ್ಕೆಗೆ

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಮೂಲಕ ಚುನಾವಣೆಯಲ್ಲಿ ಮೈತ್ರಿಪಕ್ಷಗಳು ಹೆಚ್ಚಿನ ಬಲಸಾಧಿಸಿದ್ದವು. ಇದೋಗ ಚುನಾವಣೆ ಮುಗಿಯುತ್ತಿದಂತೆ ಜೆಡಿಎಸ್ ಬಿಜೆಪಿ ನಾಯಕರನ್ನೇ ತನ್ನ ಪಕ್ಷದತ್ತ ಸೆಳೆದುಕೊಳ್ಳುತ್ತಿದೆ. ಈ ಮೂಲಕ ಮೈಸೂರು ಭಾಗದಲ್ಲಿ ಚಿಗುರೊಡೆಯುತ್ತಿದ್ದ ಕಮಲವನ್ನು ಚಿವುಟುವ ಕೆಲಸ ಮಾಡುತ್ತಿದೆ.

ಬಿಜೆಪಿ ನಾಯಕ ಕೃಷ್ಣನಾಯಕ್ ಪಕ್ಷಕ್ಕೆ ಗುಡ್ ಬೈ ಹೇಳಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಕೃಷ್ಣ ನಾಯಕ್ ಅವರನ್ನು ಜೆಡಿಎಸ್ ಗೆ ಬರಮಾಡಿಕೊಳ್ಳಲಾಯಿತು. ಈ ವೇಳೆ ಕೃಷ್ಣನಾಯಕ್ ಅಪಾರ ಬೆಂಬಲಿಗರು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

ಕೃಷ್ಣನಾಯಕ್ 2023ರ ಚುನಾವಣೆಯಲ್ಲಿ ಹೆಚ್.ಡಿ.ಕೋಟೆಯಿಂದ ಬಿಜೆಪಿಯಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಇದೀಗ ಬಿಜೆಪಿ ಮಿತ್ರಪಕ್ಷ ಜೆಡಿಎಸ್ ಗೆ ಸೇರ್ಪಡೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

Home add -Advt


Related Articles

Back to top button