Kannada NewsKarnataka NewsLatest

*ಬಿಜೆಪಿ ಶಾಸಕನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಓರ್ವ ಆರ‍ೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಶಿವಾಅಜಿನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪುಣ್ಯೇಶ್ ಎಂದು ಗುರುತಿಸಲಾಗಿದೆ. ಈತ ಕೆಪಿಸಿಸಿ ಕಚೇರಿ ಬಳಿ ಕಾಟನ್ ಬಾಕ್ಸ್ ನಲ್ಲಿ ಮೊಟ್ಟೆಯನ್ನು ಸಂಗ್ರಹಿಸಿಟ್ಟುಕೊಂಡಿದ್ದ ಎನ್ನಲಾಗಿದೆ. ಸದ್ಯ ಪುಣ್ಯೇಶ್ ನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈತ ಮೊಟ್ಟೆಯನ್ನು ಯಾಕೆ ಸಂಗ್ರಹಿಸಿ ಇಟ್ಟುಕೊಂಡಿದ್ದ, ಕೆಪಿಸಿಸಿ ಕಚೇರಿಗೆ ಬಿಜೆಪಿ ಮುತ್ತಿಗೆ ವಿಚಾರ ಈತನಿಗೆ ಮೊದಲೇ ಗೊತ್ತಿತ್ತೆ? ಯಾರ ಸೂಚನೆ ಮೇರೆಗೆ ಬಿಜೆಪಿ ಶಾಸಕನ ಮೇಲೆ ಮೊಟ್ಟೆ ದಾಳಿ ನಡೆಸಿದ್ದಾನೆ ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಬಂಧಿತ ಆರೋಪಿ ಹಿಂದೆ ಇನ್ನಷ್ಟು ಜನರು ಇರುವ ಸಾಧ್ಯತೆ ಇದೆ. ಆರೋಪಿಯನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Home add -Advt

Related Articles

Back to top button