
ಪ್ರಗತಿವಾಹಿನಿ ಸುದ್ದಿ: ಆರ್ಥಿಕ ಸಂಕಷ್ಟದಿಂದ ಮನನೊಂದ ಬಿಜೆಪಿ ಕಾರ್ಯಕರ್ತರೊಬ್ಬರು ತನ್ನದೇ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರಿವ ಬಿಜೆಪಿ ಕಾರ್ಯಕರ್ತ. ವೈಯ್ಯಾಲಿಕಾವಲ್ ನಲ್ಲಿರುವ ತನ್ನದೇ ಟೂರ್ಸ್ ಆಂಡ್ ಟ್ರಾವೆಲ್ಸ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಡೆದಿದೆ.
ಸಾವಿಗೂ ಮುನ್ನ ವೆಂಕಟೇಶ್ ವಿಡಿಯೋವೊಂದನ್ನು ಮಾಡಿದ್ದು, ಅದರಲ್ಲಿ ಹಣಕಾಸಿನ ಸಮಸ್ಯೆ ಬಗ್ಗೆ ಹೇಳಿದ್ದಾರೆ ಅಲ್ಲದೇ ಜೀವನದಲ್ಲಿ ಏನಾದರೂ ಆಗಿ ಆದರೆ ಚೀಟಿ ಏಜೆಂಟ್ ಮಾತ್ರ ಆಗಬೇಡಿ ಎಂದು ಮನವಿ ಮಾಡಿದ್ದಾರೆ. ಚೀಟಿ ವ್ಯವಹಾರದಲ್ಲಿ ಮೋಸಹೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

