Latest

ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರ “ಆ ದಿನಗಳು” ಮರೆತು ಹೋಗಿದೆಯಾ?; ಕಾಂಗ್ರೆಸ್ ವಿರುದ್ಧ ಬಿಜೆಪಿ ತಿರುಗೇಟು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರೌಡಿಶೀಟರ್ ಗಳು ಬಿಜೆಪಿ ಸೇರ್ಪಡೆ ಬಗ್ಗೆ ಕಿಡಿಕಾರಿದ್ದ ರಾಜ್ಯ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, ಒಂದು ಕಾಲದಲ್ಲಿ ಕೊತ್ವಾಲ್‌ನ ನೆಚ್ಚಿನ ಶಿಷ್ಯ! ತಿಹಾರ್ ಜೈಲಿನಿಂದ ಕರ್ನಾಟಕ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹುದ್ದೆಗೆ ಭಡ್ತಿ ಪಡೆದರು. ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರ “ಆ ದಿನಗಳು” ಮರೆತು ಹೋಗಿದೆಯಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದೆ.

ಗೂಂಡಾಗಿರಿ, ರೌಡಿಸಂ ಮೇರಿಟ್ ಅಂತ ಪರಿಗಣಿಸಿ, ವಿರೋಧದ ನಡುವೆಯೂ ನಲಪಾಡ್ ಇತ್ತೀಚೆಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದರು. ನಿಮಗೆ ಯೂತ್ ಕಾಂಗ್ರೆಸ್ ಅಧ್ಯಕ್ಷರ “ಆ ದಿನಗಳು” ಮರೆತು ಹೋಗಿದೆಯಾ? ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ವಾಗ್ದಾಳಿ ನಡೆಸಿದೆ.

ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಕೊಲೆ ಆರೋಪಿ ವಿನಯ್ ಕುಲಕರ್ಣಿ, ಗೂಂಡಾಗಿರಿಯ ಮೊಹಮ್ಮದ್ ನಲಪಾಡ್ ಯುವ ಕಾಂಗ್ರೆಸ್ ನಾಯಕರು!. ಕಾಂಗ್ರೆಸ್‌ ರೌಡಿಗಳನ್ನು ಖಂಡಿಸುತ್ತದೆಯಂತೆ! ಮೊದಲು ನಿಮ್ಮ ಪಕ್ಷದ ನಾಯಕರ “ಆ ದಿನಗಳು” ಹೇಗಿವೆ ಅಂತ ನೋಡಿ ಎಂದು ಕಿಡಿಕಾರಿದೆ.

 

ಗಡಿ ವಿವಾದ: ಹಿರಿಯ ವಕೀಲ ಮುಕುಲ್ ರೋಹ್ಟಗಿ ಭೇಟಿಯಾದ ಸಿಎಂ

https://pragati.taskdun.com/karnataka-maharashtra-border-issueadvocate-mukul-rohatgicm-basavaraj-bommai/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button