Kannada NewsKarnataka NewsLatestPolitics

*ಮಾಜಿ ಸಿಎಂ ಬೊಮ್ಮಾಯಿ, ಆರ್.ಅಶೋಕ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ಕಿ ವಿತರಣೆಗೆ ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಆರೋಪ ಖಂಡಿಸಿ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಆನಂದ್ ರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ನೇತೃತ್ವದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Home add -Advt

ಬಿಜೆಪಿ ನಾಯಕರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್, ಎನ್.ರವಿಕುಮಾರ್,ಛಲವಾದಿ ನರಾಯಣಸ್ವಾಮಿ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.

Related Articles

Back to top button