Kannada NewsKarnataka NewsLatest

ಬಿಜೆಪಿಯ ಮೂಲಮಂತ್ರವೇ ಅಭಿವೃದ್ಧಿ- ಬಸವಪ್ರಸಾದ ಜೊಲ್ಲೆ

 ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ನಿಪ್ಪಾಣಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಭಿವಶಿ, ಹಣಬರವಾಡಿ, ಕೋಗನೋಳಿ, ಕುರ್ಲಿ, ಅಕ್ಕೋಳ, ಮಮದಾಪುರ, ಗಳತಗಾ ಗ್ರಾಮದಲ್ಲಿ  ಗ್ರಾಮ ಪಂಚಾಯತ ಚುನಾವಣಾ ಪ್ರಚಾರಾರ್ಥವಾಗಿ  ಗ್ರಾಮಗಳಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಬಸವಜ್ಯೋತಿ ಯೂಥ್ ಫೌಂಡೇಶನ ಅಧ್ಯಕ್ಷ್ಯ ಬಸವಪ್ರಸಾದ ಜೊಲ್ಲೆ ಭಾಗವಹಿಸಿ,  ಮತಯಾಚಿಸಿದರು.
ಈ ವೇಳೆ ಮಾತನಾಡಿ, ಗ್ರಾಮಮಟ್ಟದಲ್ಲಿ ಬಿಜೆಪಿಯನ್ನು ಬಲಿಷ್ಠ ಮಾಡಿ, ಹಳ್ಳಿಯಿಂದ ದಿಲ್ಲಿಯ ತನಕ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಎಲ್ಲರೂ ಕೈಜೋಡಿಸಬೇಕು. ಜನಪರ  ಪಕ್ಷವಾಗಿರುವ ಬಿಜೆಪಿಯ ಮೂಲಮಂತ್ರವೇ ಅಭಿವೃದ್ಧಿಯಾಗಿದೆ. ಬಿಜೆಪಿ ಸರ್ಕಾರದ ಜನಪರ ಯೋಜನೆಗಳು ಪ್ರಜೆಗಳ ಮನೆ ಬಾಗಿಲಿಗೆ ಮುಟ್ಟುತ್ತಿದೆ. ಇದರಿಂದ ರಾಜ್ಯದಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿ ಅಮೋಘ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ನುಡಿದರು.
ಈ ಸಂದರ್ಭದಲ್ಲಿ ರಾವಸಾಬ ಫರಾಳೆ, ನಿರಂಜನ ಕಮತೆ,ವಿಕಾಸ ಸಂಕಪಾಳ, ಸುಹಾಸ ಗೂಗೆ, ನಾನಾಸೋ ಕುಲಕರ್ಣಿ, ಸುಭಾಷ ರಾಮನಕಟ್ಟಿ,ಗ್ರಾಮದ ಮುಖಂಡರು, ಅಭ್ಯರ್ಥಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button