Politics

*ಶಾಸಕ ಹೆಬ್ಬಾರ್ ಗೆ ಟಾಂಗ್ ನೀಡಿದ ಬಿ.ವೈ.ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ಮುಂದಿನ ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಲಾಗುವುದು ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಾಸಕ ಶಿವರಾಮ್ ಹೆಬ್ಬಾರ್ ಗೆ ಟಾಂಗ್ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ಬಿಜೆಪಿ ಜನಾಕ್ರೋಶ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಮುಂದಿನ ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಯಲ್ಲಾಪುರ ಕ್ಷೇತ್ರದ ಟಿಕೆಟ್ ನೀಡಲಾಗುವುದು. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಬಿಜೆಪಿ ಧ್ವಜ ಹಾರಿಸುವಂತೆ ಮಾಡೋಣ ಎಂದು ಕರೆ ನೀಡಿದರು.

ಇದೇ ವೇಳೆ ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ, ದುಷ್ಟ ಕಾಂಗ್ರೆಸ್ ನಿಂದಾಗಿ ಯಾರೂ ಬದುಕಲು ಸಾಧ್ಯವಾಗುತ್ತಿಲ್ಲ. ಯಾವ ಶಾಸಕರೂ ಅಭಿವೃದ್ಧಿಗೆ ಅನುದಾನ ತರಲು ಆಗುತ್ತಿಲ್ಲ. ಪೊಲೀಸರನ್ನು ಬಳಸಿ ರಾಜ್ಯದಲ್ಲಿ ಗೂಂಡಾಗಿರಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಇನ್ನು ಯಲ್ಲಾಪುರದಲ್ಲಿ ನಡೆದ ಬಿಜೆಪಿ ಜನಾಕ್ರೋಶ ಯಾತ್ರೆಯಲ್ಲಿ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಗೈರಾಗಿದ್ದಾರೆ.

Home add -Advt

Related Articles

Back to top button