Latest

*ನಾಲಿಗೆ ಕತ್ತರಿಸಿ ದೇವರಿಗೆ ಅರ್ಪಿಸಿದ ಭಕ್ತ*

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ದೇವರನ್ನು ಒಲಿಸಿಕೊಳ್ಳುವ ನಿಟ್ಟಿನಲ್ಲಿ ಇಲ್ಲೊಬ್ಬ ಅಂಧ ಭಕ್ತ ತನ್ನ ನಾಲಿಗೆಯನ್ನೇ ಕತ್ತರಿಸಿಕೊಂಡಿರುವ ಘೋರ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ವೀರೇಶ್ ನಾಲಿಗೆಯನ್ನೇ ಕತ್ತರಿಸಿಕೊಂಡಿರುವ ಭಕ್ತ. ತುಂಡಾಗಿರುವ ನಾಲಿಗೆ ಸಮೇತವಾಗಿ ವಿರೇಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಲಕುಂದಿ ಗ್ರಾಮದ ಗುಡ್ಡದ ಮೇಲೆ ಶಂಕರಪ್ಪ ದೇವಸ್ಥಾನವಿದ್ದು ಅಲ್ಲಿ ಭಕ್ತ ವಿರೇಶ್ ಪ್ರತಿದಿನ ಪೂಜೆ ಮಾಡುತ್ತಿದ್ದ. ದೇವರನ್ನು ಒಲಿಸಿಕೊಳ್ಳಲು ನಾಲಿಗೆಯನ್ನು ಚಾಕುವಿನಿಂದ ಕತ್ತರಿಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ವಿರೇಶ್ ಒಂದು ವರ್ಷದ ಹಿಂದೆ ಬೆರಳು ಕಟ್ ಮಾಡಿಕೊಂಡು ದೇವರ ತಲೆ ಮೇಲೆ ಇಟ್ಟಿದ್ದ ಎನ್ನಲಾಗಿದೆ. ಈಗ ತನ್ನ ನಾಲಿಗೆಯನ್ನೇ ಕತ್ತರಿಸಿಕೊಂಡಿದ್ದಾನೆ.

*ಜಾತ್ರೆಯಲ್ಲಿ ಕೈ ಹಿಡಿದು ಎಳೆದಾಡಿದ ಯುವಕ; ನೊಂದ ಯುವತಿಯಿಂದ ದುಡುಕಿನ ನಿರ್ಧಾರ*

Home add -Advt

https://pragati.taskdun.com/belagavi19-years-girlsuicideathani/

Related Articles

Back to top button