Karnataka NewsLatest

*ಚಿಲ್ಲರೆ ವಿಚಾರಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ; ಕಂಡಕ್ಟರ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಕೇವಲ 5 ರೂಪಾಯಿ ಚಿಲ್ಲರೆ ವಿಚಾರಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ಕಂಡಕ್ಟರ್ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಬಿಎಂಟಿಸಿ ಕಂಡಕ್ಟರ್ ಶ್ರೀನಿವಾಸ್ ಸಸ್ಪೆಂಡ್ ಆದವರು. ಪ್ರಯಾಣಿಕ ಅಭಿನವ್ ರಾಜ್ ಮೇಲೆ ಕಂಡಕ್ಟರ್ ಹಲ್ಲೆ ನಡೆಸಿದ್ದರು. ಈ ವಿಡಿಯೋ ವರಲ್ ಆಗಿತ್ತು. ಅಲ್ಲದೇ ಹಲ್ಲೆಗೊಳಗಾದ ಪ್ರಯಾಣಿಕ ಅಭಿನವ್ ರಾಜ್ ಬಿಎಂಟಿಸಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಂಡಕ್ಟರ್ ಶ್ರೀನಿವಾಸ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಆಗಸ್ಟ್ 6ರಂದು ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅಭಿನವ್ ರಾಜ್ ಟಿಕೆಟ್ ಗೆ 20ರೂ ಹಣ ನೀಡಿದ್ದರು. ಆದರೆ ಟಿಕೆಟ್ ಮೌಲ್ಯ 15ರೂ ಆಗಿದ್ದರಿಂದ ಕಂಡಕ್ಟರ್ 5ರೂ ಚಿಲ್ಲರೆ ಕೊಡಬೇಕಿತ್ತು. 5 ರೂ ಚಿಲ್ಲರೆ ಕೇಳಿದ್ದಕ್ಕೆ ಕಂಡಕ್ಟರ್ ಅಭಿನವ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಭಿನವ್ ಬಿಎಂಟಿಸಿಗೆ ದೂರು ನೀಡಿ ನ್ಯಾಯಕ್ಕಾಗಿ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಕಂಡಕ್ಟರ್ ಅಮಾನತುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button