
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕಂಗ್ರಾಳಿ ಕೆ ಎಚ್ ಗ್ರಾಮದ ಅಂಬೇಡ್ಕರ್ ಗಲ್ಲಿಯಲ್ಲಿ ಸ್ಪೂರ್ತಿ ಅಭಿವೃದ್ಧಿ ಸಂಸ್ಥೆಯ ಆಶ್ರಯದಲ್ಲಿ ಮಾತೆ ಸಾವಿತ್ರಿ ಬಾಯಿ ಫುಲೆ ಸ್ವ-ಸಹಾಯ ಸಂಘವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಸಂಜೆ ಉದ್ಘಾಟಿಸಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಹಿಳೆಯರು ಬೆಳೆಯುವುದಕ್ಕೆ ಎಲ್ಲ ರೀತಿಯ ಅವಕಾಶ ಹಾಗೂ ಸಹಾಯ ಒದಗಿಸಲಾಗುವುದು. ಇದಕ್ಕಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮಹಿಳೆಯರಿಗೆ ಎಲ್ಲ ಕಡೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಮಯದಲ್ಲಿ ಜಯಶ್ರೀ ಸೂರ್ಯವಂಶಿ, ಅಜಿತ್ ಮಾದರ, ದೀಪಮಾಲಾ, ಪೂಜಾ ಕಾಂಬಳೆ, ಯಲ್ಲಪ್ಪ ಪಾಟೀಲ, ಬಾಳಾರಾಮ ಪಾಟೀಲ, ರೇಖಾ ಈಡಿಕರ್ ಮೊದಲಾದವರು ಇದ್ದರು.