Kannada NewsKarnataka NewsNational
*ಗಂಗಾನದಿಯಲ್ಲಿ ಮಗುಚಿದ 21 ಜನರಿದ್ದ ದೋಣಿ*

ಪ್ರಗತಿವಾಹಿನಿ ಸುದ್ದಿ: ಗಂಗಾ ನದಿಯಲ್ಲಿ 21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ನದಿಯ ಮಧ್ಯಭಾಗದಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಮಗುಚಿದ ಭೀಕರ ಘಟನೆ ನಡೆದಿದೆ.
ಬಿಹಾರದಲ್ಲಿ ಉಕ್ಕಿ ಹರಿಯುತ್ತಿರುವ ಗಂಗಾ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು, ಪ್ರತ್ಯಕ್ಷದರ್ಶಿಗಳು ಹಾಗೂ ಸ್ಥಳೀಯರ ಸಹಾಯದಿಂದ 19 ಜನರನ್ನು ರಕ್ಷಿಸಲಾಗಿದೆ. ಇಬ್ಬರು ಪ್ರಯಾಣಿಕರು ನೀರಿನ ರಭಸಕ್ಕೆ ಕೊಚ್ಚಿಹೋಗಿ ನಾಪತ್ತೆಯಾಗಿದ್ದಾರೆ.
ಈ ಘಟನೆ ನಡೆದ ತಕ್ಷಣ ಸ್ಥಳೀಯ ಮೀನುಗಾರರು ಮತ್ತು ಗ್ರಾಮಸ್ಥರು ರಕ್ಷಣೆಗೆ ಧಾವಿಸಿದ್ದು, 19 ಜನರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.
ಪ್ರವಾಹದಲ್ಲಿ ಕೊಚ್ಚಿಹೋದ ಇಬ್ಬರಿಗಾಗಿ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡಗಳು ನದಿಯಲ್ಲಿ ತೀವ್ರ ಶೋಧ ಕಾರ್ಯ ನಡೆಸುತ್ತಿವೆ.




