Latest

*ನೇಣುಬಿಗಿದ ಸ್ಥಿತಿಯಲ್ಲಿ ದೇಹದಾರ್ಢ್ಯಪಟು ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರೂಮಿನ ಕೊಠಡಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ದೇಹದಾರ್ಢ್ಯಪಟುವೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂ ಹೀರಂಡಹಳ್ಳಿಯಲ್ಲಿ ನಡೆದಿದೆ.

ಶ್ರೀನಾಥ್ ಮೃತ ಯುವಕ. ದೇಹದಾರ್ಢ್ಯಪಟು ಹಾಗೂ ಕಾಲೇಜು ವಿದ್ಯಾರ್ಥಿಯೂ ಆಗಿದ್ದ ಶ್ರೀನಾಥ್ ಈಗ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ.

ಶ್ರೀನಾಥ್ ಮೂಲತ: ಕೋಲಾರ ಜಿಲ್ಲೆಯ ಶ್ರೀನಿವಾಸಪುರದವರು. ಬೆಂಗಳೂರಿನಲ್ಲಿ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಡಿ ಫಾರ್ಮ್ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲಿಯೂ ಭಾಗವಹಿಸುತ್ತಿದ್ದರು.

ಈಗ ತಾವಿದ್ದ ರೂಮಿನ ಕೊಠಡಿಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಶವವಾಗಿ ಪತ್ತೆಯಾಗಿದೆ. ಅವಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಕೇಂದ್ರ ಪರಿಸರ ಸಚಿವಾಲಯದ ಅಧಿಕಾರಿಗಳಿಂದ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಪರಿಶೀಲನೆ*

https://pragati.taskdun.com/union-ministry-of-environment-officialsmalaprabha-achkattu-areainspection/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button