Kannada NewsLatest

ಪ್ರಶಸ್ತಿಗೆ ಕೃತಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 
ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನವು ಪ್ರತಿ ವರ್ಷದಂತೆ ಸಿರಿಗನ್ನಡ ಪುಸ್ತಕ ಪ್ರಶಸ್ತಿ ಹಾಗು ವಿವಿಧ ದತ್ತಿ ಪ್ರಶಸ್ತಿಗಳಿಗಾಗಿ ೨೦೧೮ ರಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಿದೆ.

ಆಸಕ್ತ ಜಿಲ್ಲೆಯ ಸಾಹಿತಿಗಳು, ಲೇಖಕರು ತಮ್ಮ ಕೃತಿಗಳ ೩ ಪ್ರತಿಗಳನ್ನು ಅಗಸ್ಟ್ ೧೫ ರೊಳಗೆ ಅರವಿಂದ ಹುನುಗುಂದ, ೧೮೩ ಚಿದಂಬರನಗರ, ಬೆಳಗಾವಿ -೦೬ ಈ ವಿಳಾಸಕ್ಕೆ ಕಳುಹಿಸಿ ಕೊಡಬೇಕಾಗಿ ಪ್ರತಿಷ್ಠಾನದ ಕಾರ್ಯದರ್ಶಿ  ನೀರಜಾ ಗಣಾಚಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಮೊ: ೯೪೮೧೬೫೬೪೦೫, ೯೪೪೮೬೩೭೭೯೭, ೯೪೮೧೬೦೨೬೮೯ ಸಂಖ್ಯೆಗೆ ಸಂಪರ್ಕಿಸಬಹುದು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button