Kannada NewsKarnataka NewsLatest

*ಬಾವಿಯಲ್ಲಿ ಶವವಾಗಿ ಪತ್ತೆಯಾದ ನಾಲ್ಕು ವರ್ಷದ ಬಾಲಕ*

ಪ್ರಗತಿವಾಹಿನಿ ಸುದ್ದಿ: ನಾಲ್ಕು ವರ್ಷದ ಬಾಲಕನೊಬ್ಬ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಇಲ್ಲಿನ ಸಿರಗುಪ್ಪ ತಾಲೂಕಿನ ರಾವಿಹಾಳ್ ಗ್ರಾಮದಲ್ಲಿ ಈ ದುರಂತ ನಡೆದಿದೆ. ನಾಲ್ಕು ವರ್ಷದ ಸಿರಿ ಮೃತ ಬಾಲಕ. ಮನೆ ಬಳಿ ಆಟವಾಡುತ್ತಿದ್ದ ಬಾಲಕ ಎರಡು ದಿನಗಳಿಂದ ಕಾಣೆಯಾಗಿದ್ದ. ಪೋಷಕರು ಆತನಿಗಾಗಿ ತೀವ್ರ ಹುಡುಕಾಟ ನಡೆಸಿದ್ದರು. ಆದರೆ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಇದೀಗ ಬಾಲಕನ ಮೃತದೇಹ ಬಾವಿಯಲ್ಲಿ ಪತ್ತೆಯಗೈದೆ.

Home add -Advt

ಬಾಲಕನ ಶವ ಬಾವಿಯಲ್ಲಿ ತೇಲುತ್ತಿರುವುದನ್ನು ಕಂಡು ಕುಟುಂಬದವರು ಆಘಾತಗೊಂಡಿದ್ದಾರೆ. ಬಾವಿಗೆ ಯಾವುದೇ ಕಟ್ಟೆ ಇರಲಿಲ್ಲ ಇದರಿಂದ ಆಟವಾಡುವಾಗ ಬಾಲಕ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿರಬಹುದು ಎನ್ನಲಾಗಿದೆ.

Related Articles

Back to top button