*ಪೌರ ಕಾರ್ಮಿಕರ ದಿನಾಚರಣೆ ಬಹಿಷ್ಕರಿಸಿ ಧರಣಿ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸೇವೆ ಖಾಯಂಗೊಳಿಸುವುದು, ಬೆಳಗಿನ‌ ತಿಂಡಿ ಸೇರಿ‌ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಪೌರ ಕಾರ್ಮಿಕರ ದಿನಾಚರಣೆಯನ್ನು ಬಹಿಷ್ಕರಿಸುವ ಮೂಲಕ ಪೌರ ಕಾರ್ಮಿಕರು ಧರಣಿ ನಡೆಸಿದರು.  ಇಂದು ಬೆಳಗಾವಿ ಮಹಾನಗರ ಪಾಲಿಕೆ ಮುಂದೆ ಧರಣಿ ಕುಳಿತ ಪೌರ ಕಾರ್ಮಿಕರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇವಲ ಪೌರ ಕಾರ್ಮಿಕರ ದಿನ ಆಚರಿಸಿದರೆ ಸಾಲದು. ನಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಆಮೇಲೆ ಕಾರ್ಯಕ್ರಮ ಮಾಡುವಂತೆ ಆಡಳಿತಕ್ಕೆ ಒತ್ತಾಯಿಸಿದರು. … Continue reading *ಪೌರ ಕಾರ್ಮಿಕರ ದಿನಾಚರಣೆ ಬಹಿಷ್ಕರಿಸಿ ಧರಣಿ*