Belagavi NewsBelgaum NewsKannada NewsKarnataka NewsLatest
*ಬೆಳಗಾವಿ ನಗರದಲ್ಲಿ ಭೀಕರ ಮರ್ಡರ್: ಪತ್ನಿ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ನಗರದಲ್ಲಿ ವ್ಯಕ್ತಿ.ಯೋರ್ವನ ಭೀಕರ ಕೊಲೆಯಾಗಿದೆ. ಪ್ರಕರಣ ಸಂಬಂಧ ಮೃತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.
ರಾಮತೀರ್ಥ ನಗರದಲ್ಲಿ ಈ ಘಟನೆ ನಡೆದಿದೆ. ಚಿಕ್ಕೋಡಿ ತಾಲೂಕಿನ ಅಮಿತ್ ರಾಯಬಾಗ್ ಕೊಲೆಯಾದ ವ್ಯಕ್ತಿ. ಇವರು ಪತ್ನಿ ಮತ್ತು ಇಬ್ಬರು ಚಿಕ್ಕ ಮಕ್ಕಳೊಂದಿಗೆ (9 ವರ್ಷ ಮತ್ತು 7 ವರ್ಷ) ರಾಮತೀರ್ಥ ನಗರದಲ್ಲಿ ವಾಸವಾಗಿದ್ದರು.
ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದಾಗಲೇ ಪತಿಯ ಕತ್ತು ಬಿಗಿದು ಕೊಲೆ ಮಾಡಲಾಗಿದೆ. ಪತಿ ಕುಡಿದು ಗಲಾಟೆ ಮಾಡುತ್ತಿದ್ದುದರಿಂದ ಪತ್ನಿಯೇ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈ ಹಿಂದೆ ಕೂಡ ಆತನ ವಿರುದ್ಧ ಪತ್ನಿ ಪೊಲೀಸರಿಗೆ ದೂರು ನೀಡಿದ್ದಳೆನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ