
ಪ್ರಗತಿವಾಹಿನಿ ಸುದ್ದಿ: ಬುಲೆಟ್ ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಯಲಹಂಕ ನ್ಯೂಟೌನ್ ನ ಉನ್ನಿಕೃಷ್ಣ ಜಂಕ್ಷನ್ ನಲ್ಲಿ ಈ ದುರಂತ ಸಂಭವಿಸಿದೆ . ಕಿರಣ್ (25) ಹಾಗೂ ಯಶ್ವಂತ್ (25) ಮೃತ ಯುವಕರು. ಬೈಕ್ ಹಿಮ್ಬದಿ ಸವಾರ ಗೌತಮ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ.
ಹೆಲ್ಮೆಟ್ ಧರಿಸದೇ ತ್ರಿಬಲ್ ರೈಡಿಂಗ್ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಪಘಾತದ ರಭಸಕ್ಕೆ ತಲೆಗೆ ಗಂಭೀರವಾಗಿ ಗಾಯಗಳಾಗಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.



