Latest

ಮನೆ ಮೇಲೆ ಬಿದ್ದ ದಿಬ್ಬಣದ ಬಸ್; ಐದು ಜನರ ದುರಂತ ಸಾವು

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ದಿಬ್ಬಣದ ಬಸ್ ಮನೆಯೊಂದರ ಮೇಲೆ ಉರುಳಿ ಬಿದ್ದ ಪರಿನಾಮ ಐದು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕರ್ನಾಟಕ-ಕೇರಳ ಗಡಿ ಭಾಗದ ಕಲ್ಲಪ್ಪಳ್ಳಿಯಲ್ಲಿ ನಡೆದಿದೆ.

63 ಪ್ರಯಾಣಿಕರನ್ನು ಹೊತ್ತ ಮದುವೆ ದಿಬ್ಬಣದ ಬಸ್ ಪುತ್ತೂರಿನಿಂದ ಕೇರಳದ ಪಾಣತ್ತೂರಿಗೆ ತೆರಳುತ್ತಿತ್ತು. ಈ ವೇಳೆ ಕಲ್ಲಪ್ಪಳ್ಳಿ ಬಳಿ ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button