LatestUncategorized

*ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿ; ಇಬ್ಬರು ವಿದಾರ್ಥಿಗಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮುಂಬೈ: ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.

ರಾಯಘಡ ಜಿಲ್ಲೆಯ ಖೋಪೋಲಿಯಲ್ಲಿ ಕೋಚಿಂಗ್ ತರಬೇತಿ ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿಕೊಂಡು ಹಿಂತಿರುಗುತ್ತಿದ್ದರು. ಈ ವೇಳೆ ಬಸ್ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Related Articles

ಮುಂಬೈನ ಚೆಂಬೂರ್ ನಲ್ಲಿರುವ ಕೋಚಿಂಗ್ ಇನ್ಸ್ ಟಿಟ್ಯೂಟ್ ನ 10ನೇ ತರಗತಿಯ 48 ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರಿದ್ದ ಬಸ್ ಲೋನಾವಾಲಾದಿಂದ ಹಿಂತಿರುಗುತ್ತಿತ್ತು. ಮುಂಬೈ-ಪುಣೆ ಹೆದ್ದಾರಿಯಲ್ಲಿ ಬೆಟ್ಟಗಳನ್ನು ಇಳಿಯುವಾಗ ಬಸ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.

ಮೃತ ವಿದ್ಯಾರ್ಥಿಗಳನ್ನು ಹಿತಿಕಾ ಖನ್ನಾ (16) ಹಾಗೂ ರಾಜ್ ರಾಜೇಶ್ ಮಾತ್ರೆ (16) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ವಿದಾರ್ಥಿಗಳ ಕೈ ಮುರಿದಿದ್ದು, ತೆಲೆಗೆ ಗಭೀರವಾದ ಗಾಯಗಳಾಗಿವೆ.

*ಗುಡುಗು ಸಹಿತ ಭಾರಿ ಮಳೆ; 15 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

 

https://pragati.taskdun.com/karnatakarain5-daysalert/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button