Latest

ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆಯೇ ಹರಿದ ಬಸ್

ಪ್ರಗತಿವಾಹಿನಿ ಸುದ್ದಿ; ಲಕ್ನೋ: ಬಸ್ ಗೆ ಕಾಯುತ್ತಿದ್ದವರ ಮೇಲೆ ಬಸ್ ಹರಿದ ಪರಿಣಾಮ ಐವರು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.

ಮೃತಪಟ್ಟವರಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ. ಶಾಮ್ಲಿ ಜಿಲ್ಲೆಯ ಥಾನ ಬನ್ ವಾನ್ ನಗರದಲ್ಲಿ ಈ ದುರಂತ ಸಂಭವಿಸಿದೆ. ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಹರಿದಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರ ಸ್ಥಿತಿ ಕೂಡ ಗಂಭೀರವಾಗಿದೆ.

Home add -Advt

Related Articles

Back to top button