Kannada NewsKarnataka NewsLatest

*ಖಾಸಗಿ ಬಸ್ ಪಲ್ಟಿ; ಇಬ್ಬರು ಸ್ಥಳದಲ್ಲೇ ಸಾವು*

49 ಜನರಿಗೆ ಗಾಯ


ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 49 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸುಳೆಮುರ್ಖಿ ತಿರುವಿನಲ್ಲಿ ನಡೆದಿದೆ.

ತುಮಕೂರಿನ ಲೋಕೇಶ್(26), ಚಿಕ್ಕಬಳ್ಳಾಪುರದ ರುದ್ರೇಶ್ (38) ಮೃತರು. 49 ಪ್ರಯಾಣಿಕರು ಗಾಯಗೊಂಡಿದ್ದಾರೆ. ಓರ್ವ ಮಹಿಳೆ ಕೈ ಮುರಿದಿದೆ.

Home add -Advt

ಗೌಬಿದನೂರಿನಿಂದ ಬಸ್ ನಲ್ಲಿ 53 ಜನರು ಧರ್ಮಸ್ಥಕ್ಕೆ ತೆರಳುತ್ತಿದ್ದರು. ಈ ವೇಳೆ ಸುಳೆಮುರ್ಖಿ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ. ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಹಾಗೂ ಹೊನ್ನಾವರ ಆಸ್ಪತ್ರೆಗೆ ದಾಖಲಿಸಲಾಗಿದೆ.


Related Articles

Back to top button