National

*ಸೇತುವೆ ಮೇಲಿಂದ ಬಿದ್ದ ಬಸ್: ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ಸೇತುವೆ ಮೇಲಿಂದ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಧಾರುಣ ಘಟನೆ ಅಮರಾವತಿಯ ಮೆಲ್‌ಘಾಟ್‌ನಲ್ಲಿ ನಡೆದಿದೆ. 

ಈ ಘಟನೆಯಲ್ಲಿ ಬಸ್‌ನಲ್ಲಿದ್ದ ಸುಮಾರು 30 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲಾ ಪ್ರಯಾಣಿಕರನ್ನು ಸೇಮದೋಹನ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಇನ್ನು ನದಿಗೆ ಬಿದ್ದ ಅಪಘಾತದ ಬಸ್‌ನ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸುವ ಪ್ರಯತ್ನ ನಡೆದಿದೆ. ಅಪಘಾತದ ಬಗ್ಗೆ ಪರತವಾಡ, ಚಿಕಲದಾರ ಹಾಗೂ ಧರಣಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ರಕ್ಷಣಾ ತಂಡಗಳು ಅಪಘಾತ ಸ್ಥಳಕ್ಕೆ ಧಾವಿಸಿದೆ.

Related Articles

Back to top button