Karnataka NewsLatest

*ಪ್ರಯಾಣಿಕರಿಗೆ ಬಿಗ್ ಶಾಕ್: ಬಸ್ ಪ್ರಯಾಣ ದರ ಏರಿಕೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್*

ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷದ ಆರಂಭದ ದಿನಗಳಲ್ಲೇ ರಾಜ್ಯದ ಜನತೆಗೆ ಒಂದರ ಮೇಲೊಂದರಂತೆ ಬೆಲೆ ಏರಿಕೆ ಬಿಸಿ ತಟ್ಟುವುದು ಖಚಿತವಾಗಿದೆ. ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

Home add -Advt

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸಲ್ಲಿಸಿದ್ದ ಪ್ರಸ್ತಾವನೆ ಬಗ್ಗೆ ಚರ್ಚಿಸಲಾಗಿದ್ದು, ಬಸ್ ಟಿಕೆಟ್ ದರ ಹೆಚ್ಚಿಸಲು ಸಚಿವ ಸಂಪುಟ ಸಭೆ ಸಮ್ಮತಿ ಸೂಚಿಸಿದೆ.

ಕೆ.ಎಸ್.ಆರ್. ಟಿ.ಸಿ ಶೇ.30ರಷ್ಟು, ಬಿಎಂಟಿಸಿ ಶೇ.42ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಮನವಿ ಸಲ್ಲಿಸಿತ್ತು. ನಾಲ್ಕು ನಿಗಮಗಳ ಪ್ರಸ್ತಾವನೆ ಪರಿಗಣಿಸಿ ಶೇ.15ರಷ್ಟು ಪ್ರಯಾಣ ದರ ಹೆಚ್ಚಿಸಲು ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ.

Related Articles

Back to top button