Kannada NewsKarnataka NewsLatest

*ಕೆ.ಕೆ.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬಸ್ ಬರುವುದನ್ನು ಗಮನಿಸದೇ ರಸ್ತೆ ದಾಟುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಕೆ.ಕೆ.ಆರ್.ಟಿ.ಸಿ ಬಸ್ ಹರಿದು ಹೋಗಿದ್ದು, ಕಂದಮ್ಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ನಲ್ಲಿ ಈ ದುರಂತ ಸಂಭವಿಸಿದೆ. ರಸ್ತೆ ಪಕ್ಕದಲ್ಲಿಯೇ ಮನೆಯಿದ್ದು, ಮಗು ಮನೆಯಂಗದಲ್ಲಿ ಆಟವಾದುತ್ತಿತ್ತು. ಇದ್ದಕ್ಕಿದ್ದಂತೆ ಬಾಲಕಿ ರಸ್ತೆ ದಾಟಲು ಮುಂದಾಗಿದೆ. ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

Home add -Advt

ದಿವ್ಯಾಶ್ರೀ (4) ಮೃತ ಕಂದಮ್ಮ. ಗೂಗಲ್ ನಿಂದ ದೇವದುರ್ಗಕ್ಕೆ ಬಸ್ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button