Latest

*ಬಸ್ ನಿಂದ ಬಿದ್ದು, ಚಕ್ರದಡಿ ಸಿಲುಕಿ ಸಾವನ್ನಪ್ಪಿದ ವಿದ್ಯಾರ್ಥಿ*

ಪ್ರಗತಿವಾಹಿನಿ ಸುದ್ದಿ; ಕೋಯಮತ್ತೂರ್: ಚಲಿಸುತ್ತಿದ್ದ ಬಸ್ ನಿಂದ ಆಯತಪ್ಪಿ ಬಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ, ಬಸ್ ನ ಚಕ್ರದಡಿ ಸಿಲುಕಿ ಸಾವನ್ನಪ್ಪಿದ ಘಟನೆ ಕೇರಳದ ಕೋಯಮತ್ತೂರ್ ನಲ್ಲಿ ನಡೆದಿದೆ.

ಕೇರಳದ ಮರೈಯೂರ್ ಮದನ್ ಲಾಲ್ ಮೃತ ವಿದ್ಯಾರ್ಥಿ. ಪೊಲ್ಲಾಚಿಯ ಖಾಸಗಿ ಕಾಲೇಜಿನಲ್ಲಿ ಬಿ ಎಸ್ ಸಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮೂರನೇ ವರ್ಷದ ವಿದ್ಯಾರ್ಥಿ.

ಕೊಯಮತ್ತೂರ್ ನಿಂದ ಪಳನಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಈ ದುರಂತ ಸಂಭವಿಸಿದೆ. ಬಸ್ ತಿರುವಿನಲ್ಲಿ ಹೋಗುವಾಗ ವಿದ್ಯಾರ್ಥಿ ಬಸ್ ನಿಮ್ದ ಕೆಳಗೆ ಬಿದ್ದಿದ್ದು, ಆತನ ಮೇಲೆಯೇ ಬಸ್ ಹರಿದಿದೆ. ಘಟನಾ ಸ್ಥಳಕ್ಕೆ ಕೋಮಂಗಲಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

*ಭಯಂಕರ ಭೂಕಂಪಕ್ಕೆ ತತ್ತರಿಸಿದ ಟರ್ಕಿ; 4000 ಜನರು ಸಾವು*

Home add -Advt

https://pragati.taskdun.com/turkey-earthquakesyria4000-people-death/

Related Articles

Back to top button