
ಪ್ರಗತಿವಾಹಿನಿ ಸುದ್ದಿ; ನೋಯ್ಡಾ: ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ.
ಚರಂಡಿ ಕಾಮಗಾರಿ ವೇಳೆ ಏಕಾಏಕಿಯಾಗಿ ಗೋಡೆ ಕುಸಿದು ಬಿದ್ದಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ನೊಯ್ಡಾ ಪ್ರಾಧಿಕಾರ ಸೆ.21ರಂದು ಜಲ ವಾಯು ವಿಹಾರ್ ಬಳಿ ಒಳಚರಂಡಿ ದುರಸ್ತಿ ಕಾಮಗಾರಿ ಗುತ್ತಿಗೆ ನೀಡಿತ್ತು. ಕಾರ್ಮಿಕರು ಇಟ್ಟಿಗೆಯನ್ನು ಹೊರತೆಗುವಾಗ ಗೋಡೆ ಕುಸಿದು ಬಿದ್ದಿದ್ದು, ಈ ದುರಂತ ಸಂಭವಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಜನರ ಕನಸು ನನಸು; ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕಾರದ ಸಮ್ಮತಿ
https://pragati.taskdun.com/politics/uttara-kannadasuper-speciality-hospitaldr-sudhakar/