Karnataka News
*ಬಸ್- ಕಾರು ಭೀಕರ ಅಪಘಾತ: ಬೆಳಗಾವಿ ಮೂಲದ ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಬಸ್ ಹಾಗೂ ಕಾರು ಪರಸ್ಪರ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸವರಾಜಪ್ಪ(38), ಶ್ರೀಧರ (32), ವಿಜಯ್ ಕುಮಾರ್ (35) ಮೃತ ದುರ್ದೈವಿಗಳು. ಮೃತರು ಬೆಳಗಾವಿ ಮೂಲದವರು ಎಂದು ತಿಳಿದುಬಂದಿದೆ.
ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



