Belagavi NewsBelgaum News

*ಬೆಳಗಾವಿಯಲ್ಲಿ ಮೂರು ದಿನ ಕಸಾಯಿಖಾನೆ, ಮಾಂಸಾಹಾರಿ ಅಂಗಡಿ ಬಂದ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಏಪ್ರೀಲ್-2025 ರ ಮಾಹೆಯಲ್ಲಿ ಬರುವಂತಹ ಶ್ರೀರಾಮನವಮಿ, ಮಹಾವೀರ ಜಯಂತಿ ಹಾಗೂ ಡಾ.ಬಾಬಾಸಾಹೇಬ ಅಂಬೇಡ್ಕರ ಜಯಂತಿ ಪ್ರಯುಕ್ತ ಬೆಳಗಾವಿ ಮಹಾನಗರ ವ್ಯಾಪ್ತಿಯಲ್ಲಿ ಕಸಾಯಿಖಾನೆ, ಮಾಂಸಾಹಾರಿ ಅಂಗಡಿಗಳನ್ನು ಬಂದ್ ಮಾಡಲು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರು ಸೂಚಿಸಿದ್ದಾರೆ.

ಏಪ್ರಿಲ್ 6, ರವಿವಾರ ದಂದು ಶ್ರೀರಾಮನವಮಿ, ಏಪ್ರೀಲ್ 10, ಶುಕ್ರವಾರ ಮಹಾವೀರ ಜಯಂತಿ ಹಾಗೂ ಏಪ್ರೀಲ್ 14, ಸೋಮವಾರ ರಂದು ಡಾ. ಬಾಬಾಸಾಹೇಬ ಅಂಬೇಡ್ಕರ ಜಯಂತಿ ನಿಮಿತ್ತ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳನ್ನು ಬಂದು ಮಾಡಿ ಸಹಕರಿಸುವಂತೆ ಕೋರಲಾಗಿದೆ. ಸದರಿ ದಿನದಂದು ಕಸಾಯಿಖಾನೆ/ಮಾಂಸಾಹಾರಿ ಅಂಗಡಿ ಮಾಲೀಕರು ಆದೇಶವನ್ನು ಉಲ್ಲಂಘನೆ ಮಾಡಿರುವದು ಕಂಡು ಬಂದರೆ ಅಂತಹ ಮಾಲೀಕರುಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button