Kannada NewsKarnataka NewsLatest
*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ AEE*

ಪ್ರಗತಿವಾಹಿನಿ ಸುದ್ದಿ: ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಸ್ಕಾಂ ಎಇಇ ಯನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಸ್ಕಾಂ ಎಇಇ ನವೀನ್ ಲೋಕಾಯುಕ್ತ ಬಲೆಗೆ ಬಿದ್ದವರು. 80 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ನವೀನ್ ನ್ನು ವಶಕ್ಕೆ ಪಡೆದಿದ್ದಾರೆ.
ನಾಗರಬಾವಿ ವ್ಯಾಪ್ತಿಯ ತಣಿಸಂದ್ರ ಬೆಸ್ಕಾಂ ಕಚೇರಿಯ ಎಇಇ ಆಗಿರುವ ನವೀನ್ 80 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ.




