Election NewsKarnataka NewsLatestPolitics

*ದಾವಣಗೆರೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಮುನ್ನಡೆ; ಕಾಂಗ್ರೆಸ್ ನ ಸಮರ್ಥ್ ಶಾಮನೂರು ಹಿನ್ನಡೆ*

ಪ್ರಗತಿವಾಹಿನಿ ಸುದ್ದಿ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಜೊತೆಗೆ ಇಂದು ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಕೂಡ ಪ್ರಕಟವಾಗಲಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಮತ ಎಣಿಕೆ ಚುರುಕುಗೊಂಡಿದೆ.

ಸದ್ಯದ ಮಾಹಿತಿ ಪ್ರಕಾರ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹಿನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ. ದಾಸಕರಿಯಪ್ಪ 6ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಮುನ್ನಡೆಯಲ್ಲಿದ್ದು, 25,728 ಮತಗಳನ್ನು ಪಡೆದಿದ್ದಾರೆ.

Home add -Advt

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಹಿನ್ನಡೆಯಲ್ಲಿದ್ದು, 17,189 ಮತಗಳಲ್ಲಿ ಹಿನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ 8,539 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಒಟ್ಟು 21 ಸುತ್ತುಗಳ ಎಣಿಕೆ ನಡೆಯಬೇಕಿದ್ದು, ಇನ್ನೂ 15 ಸುತ್ತುಗಳು ಬಾಕಿ ಇವೆ.


Related Articles

Back to top button