Election NewsKarnataka NewsLatestPolitics
*ಸಿಎಂ ಭೇಟಿಯಾದ ಸಾದಿಕ್ ಪೈಲ್ವಾನ್: ನಿವೃತ್ತಿ ಘೋಷಣೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸಾದಿಕ್ ಪೈಲ್ವಾನ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿರುವ ಅವರು, ಕಣದಿಂದ ಹಿಂದೆ ಸರಿಯುವಂತೆ ಸಿಎಂ ಹೇಳಲಿ ಎಂದಿದ್ದರು.
ಈಗ ನಾಮಪತ್ರ ಹಿಂದಕ್ಕೆ ಪಡೆಯುವ ಅವಧಿ ಮುಕ್ತಾಯವಾಗಿದ್ದು, ಸಾದಿಕ್ ಅವರು ಕಣದಿಂದ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ.




