Karnataka NewsLatest

*ಮಾಜಿ ಸಚಿವ ಬೈರತಿ ಬಸವರಾಜ್ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಬೈರತಿ ಬಸವರಾಜ್ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಕಾಮನಟಗಿ ಬಳಿ ನಡೆದಿದೆ.

ಬಿಜೆಪಿ ಚುನಾವಣಾ ಪ್ರಚಾರ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಆದರೆ ಕಾರಿನಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಇರಲಿಲ್ಲ. ಬೇರೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಅಪಘಾತದಲ್ಲಿ ಕಾರಿನ ಚಾಲಕ ಹಾಗೂ ಗನ್ ಮ್ಯಾನ್ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Home add -Advt


Related Articles

Back to top button