Kannada NewsKarnataka NewsLatest

*BREAKING NEWS: ಸಿ.ಪಿ ಯೋಗೇಶ್ವರ್ ಭಾವ ಮಹಾದೇವಯ್ಯ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಮಾಜಿ ಸಚಿವ, ಬಿಜೆಪಿ ಎಂ ಎಲ್ ಸಿ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಅವರ ಶವ ಪತ್ತೆಯಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಶವ ಪತ್ತೆಯಾಗಿದೆ. ರಾಮಾಪುರ ಗ್ರಾಮದಲ್ಲಿ ನಿನ್ನೆ ರಾತ್ರಿ ಮಹದೇವಯ್ಯ ಅವರ ಕಾರು ಪತ್ತೆಯಾಗಿತ್ತು. ಕಾರಿನ ಟೈ ಲ್ಯಾಂಪ್ ಬಳಿ ರಕ್ತದ ಕಲೆ ಪತ್ತೆಯಾಗಿತ್ತು. ಇದು ಆತಂಕಕ್ಕೆ ಕಾರಣವಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಮಹದೇವಯ್ಯ ಅವರನ್ನು ಸುಪಾರಿ ಕೊಟ್ಟು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.

ಕೃತ್ಯಕ್ಕೆ ಸಂಬಂಧಿಸಿದ ಸಿಸಿಟಿವಿ ಕ್ಯಾಮರಾವನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿ, ಮಹದೇವಯ್ಯನವರಿಗಾಗಿ ರಾಮಾಪುರ ಅರಣ್ಯ ಪ್ರದೇಶದಲ್ಲಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದರು. ಇದೀಗ ಮಹದೇವಯ್ಯನವರ ಶವ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ದುಷ್ಕರ್ಮಿಗಳು ಮಹದೇವಯ್ಯ ಅವರನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಡಿಸೆಂಬರ್ 2ರಂದು ಮಹದೇವಯ್ಯ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button