Latest

ಮುಂದಿನ ದಿನದಲ್ಲಿ ಏನಾಗುತ್ತೋ ನೋಡೋಣ ಎಂದ ಸಿ.ಪಿ.ಯೋಗೇಶ್ವರ್

ಪ್ರಗತಿವಾಹಿನಿ ಸುದ್ದಿ; ರಾಮನಗರ: ಇನ್ಮುಂದೆ ನಾನು ರಾಜಕಾರಣದ ಬಗ್ಗೆ ಮಾತನಾಡಬಾರದು ಎಂದು ತೀರ್ಮಾನಿಸಿದ್ದೇನೆ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮ್ಮ ಪಕ್ಷದ ವರಿಷ್ಠರು ಗೊಂದಲಕ್ಕೆ ತೆರೆ ಎಳೆಯಲಿದ್ದಾರೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಸಚಿವರು, 2 ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪನವರೇ ಹೇಳಿದ್ದಾರೆ. ಯಡಿಯೂರಪ್ಪನವರೇ ನೇರವಾಗಿ ಸ್ಪಷ್ಟಪಡಿಸಿದ್ದಾರೆ ಅವರೇ ಹೇಳಿದ ಮೇಲೆ ನಮ್ಮದು ಏನಿಲ್ಲ. ನಾವೆಲ್ಲರೂ ಅವರನ್ನು ಒಪ್ಪಿಕೊಳ್ಳುತ್ತೇವೆ. ಯಾರು ಬೇಡ ಎನ್ನುತ್ತಾರೆ? ಈ ಸಂದರ್ಭದಲ್ಲಿ ನಾನು ಏನೂ ಹೇಳುವುದಿಲ್ಲ ಎಂದರು.

ಸಣ್ಣಪುಟ್ಟ ಗೊಂದಲಗಳ ಬಗ್ಗೆ ವರಿಷ್ಠರು ನೋಡಿಕೊಳ್ಳುತ್ತಾರೆ. ಮುಂದಿನ ದಿನಗಳಲ್ಲಿ ಏನಾಗುತ್ತೆ ನೋಡೋಣ. ಪಕ್ಷದ ವರಿಷ್ಠರು ಎಲ್ಲಾ ಗೊಂದಲಕ್ಕೆ ತೆರೆ ಎಳೆಯುತ್ತಾರೆ ಎಂದು ಹೇಳಿದರು.

ರಾಜ್ಯ ಬಿಜೆಪಿಯಲ್ಲಿ ಮತ್ತೆ ಗೊಂದಲ; ಅರವಿಂದ ಬೆಲ್ಲದ್ ದೆಹಲಿ ಭೇಟಿ ಊಹಾಪೋಹ
ಸಿಡಿ ಕೇಸ್; ಎಸ್ ಐಟಿ ಮುಂದೆ ಹಾಜರಾದ ಕಿಂಗ್ ಪಿನ್ ಗಳು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button