Kannada NewsKarnataka NewsLatest

*ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಎತ್ತಂಗಡಿ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಸಿ.ಎಸ್.ಷಡಕ್ಷರಿ ಶಿವಮೊಗ್ಗ ಲೆಕ್ಕಾಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಅವರ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶಿವಮೊಗ್ಗದಿಂದ ಅವರನ್ನು ಎತ್ತಂಗಡಿ ಮಾಡಲಾಗಿದೆ.

Home add -Advt

ಶಿವಮೊಗ್ಗ ಲೆಕ್ಕಾಧೀಕ್ಷಕ ಹುದ್ದೆಯಿಂದ ಕೋಲಾರದ ಸಮಾಜ ಕಲ್ಯಾಣ ಇಲಾಖೆ ಲೆಕ್ಕಾಧೀಕ್ಷಕ ಹುದ್ದೆಗೆ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಯಲ್ಟಿ ಪಾವತಿಸದೇ ಶಿವಮೊಗ್ಗದ ಅಬ್ಬಲಗೆರೆ ಕೆರೆಯಿಂದ ಅಕ್ರಮವಾಗಿ ಮಣ್ಣು ಸಾಗಿಸಿ ಸರ್ಕಾರದ ಬೊಕ್ಕಸಕ್ಕೆ 71,45,920 ರೂಪಾಯಿ ನಷ್ಟ ಉಂಟುಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಾರ್ಯಪಾಲಕ ಇಂಜಿನಿಯರ್ ವರದಿಯನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಷಡಕ್ಷರಿ ಅವರ ವರ್ಗಾವಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಬೆಳವಣಿಗೆ ಬಳಿಕ ಷಡಕ್ಷರಿ ಅವರನ್ನು ಎತ್ತಂಗಡಿ ಮಾಡಲಾಗಿದೆ.


Related Articles

Back to top button