Belagavi NewsBelgaum NewsKarnataka News

*ಸಿಪಿಐ ಸಸ್ಪೆಂಡ್ ಗೆ ಖಂಡನೆ: ನಾಳೆ ಖಾನಾಪುರ ಬಂದ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸಿಪಿಐ ಅಮಾನತು ಖಂಡಿಸಿ ವಿವಿಧ ಸಂಘಟನೆಗಳು ಖಾನಾಪುರ ಬಂದ್ ಗೆ ಕರೆ ನೀಡಿವೆ.

ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅಮಾನತು ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳು ಖಾನಾಪುರ ಬಂದ್ ಗೆ ಕರೆ ನೀಡಿವೆ. ಬಂದ್ ಕರೆಗೆ ಬಿಜೆಪಿ-ಜೆಡಿಎಸ್ ಪಕ್ಷಗಳು ಕೂಡ ಬೆಂಬಲ ಘೋಷಿಸಿವೆ.

ಸಿಪಿಐ ಅಮಾನತು ಮಾಡಿರುವುದನ್ನು ಪ್ರಶ್ನಿಸಿ ಹಾಗೂ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹಿಸಿ ನಾಳೆ ಖಾನಾಪುರದಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

Home add -Advt

Related Articles

Back to top button