Latest

ಸಂಪುಟ ವಿಸ್ತರಣೆ: ಮಾಹಿತಿ ನೀಡಿದ ಬೊಮ್ಮಾಯಿ

 

 ಬೆಂಗಳೂರು ಜಿಲ್ಲಾ ಉಸ್ತುವಾರಿ ನೇಮಕ ವಿಚಾರ – ಎಲ್ಲರ ಜತೆ ಚರ್ಚೆ ಮಾಡಿ ಸೌಹಾರ್ದಯುತ ಪರಿಹಾರ

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು  : ಬೆಂಗಳೂರು ಜಿಲ್ಲೆ ಉಸ್ತುವಾರಿ  ಸಚಿವರ ನೇಮಕದ ಬಗ್ಗೆ ಎಲ್ಲರ ಜತೆ ಸಮಾಲೋಚನೆ ನಡೆಸಿ ಸೌಹಾರ್ದಯುತವಾದ ನಿರ್ಧಾರವನ್ನು ಶೀಘ್ರದಲ್ಲಿ  ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನವದೆಹಲಿಯಿಂದ ಹಿಂದಿರುಗಿದ ಬಳಿಕ ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು.
ಬೆಂಗಳೂರು ಜಿಲ್ಲೆ ಉಸ್ತುವಾರಿ ಸಚಿವರನ್ನು ನೇಮಕ ಮಾಡುವ ವಿಷಯವನ್ನು ಎಲ್ಲರೊಂದಿಗೆ ಚರ್ಚಿಸಲಾಗುವುದು.‌ಎಲ್ಲರೂ ನಮ್ಮವರೇ. ಹೀಗಾಗಿ ಎಲ್ಲರ ಜತೆ ಸಮಾಲೋಚನೆ ನಡೆಸಿ ಸೌಹಾರ್ದಯುತವಾಗಿ ತೀರ್ಮಾನ ಕೈಗೊಳ್ಳಲಾಗುವುದು. ಬೆಂಗಳೂರು ಮಹತ್ವದ ಜಿಲ್ಲೆಯಾಗಿದ್ದು , ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ನಿರ್ಧಾರವನ್ನು ಶೀಘ್ರದಲ್ಲಿ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
 ನವದೆಹಲಿ ಭೇಟಿಯ ವೇಳೆ ಸಚಿವಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆ ಸಾಧ್ಯವಾಗಿಲ್ಲ ಎಂದೂ ಅವರು ತಿಳಿಸಿದರು.
ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ‌ ನಡ್ಡಾ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದೆ. ಅವರು ಅನ್ಯ  ಕಾರ್ಯಗಳಲ್ಲಿ ನಿರತರಾಗಿದ್ದರು. ಹೀಗಾಗಿ ಅವರ ಭೇಟಿ  ಸಾಧ್ಯವಾಗಲಿಲ್ಲ . ಸಚಿವ ಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ .‌
-ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಗಳು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button