Latest

ರಾಜ್ಯ ಸಂಪುಟ ವಿಸ್ತರಣೆ ಮುಂದಕ್ಕೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: 

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ ಹೋಗಿದೆ.

ಇದೇ ಬುಧವಾರ ಸಂಪುಟ ವಿಸ್ತರಣೆಗೆ ದಿನ ನಿಗದಿಯಾಗಿತ್ತು. ಆದರೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ ಕಾರ್ನಾಡ ನಿಧನ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗಿದೆ.

ರಾಜ್ಯದಲ್ಲಿ 3 ದಿನ ಶೋಕಾಚರಣೆ ಘೋಷಿಸಲಾಗಿರುವುದರಿಂದ ಯಾವುದೇ ಸರಕಾರ ಕಾರ್ಯಕ್ರಮ ನಡೆಸಲು ಸಾಧ್ಯವಿಲ್ಲ. ಹಾಗಾಗಿ ಸಂಪುಟ ವಿಸ್ತರಣೆ ಮುಂದಿನ ವಾರ ನಡೆಯಬಹುದು. 

ಈ ಮಧ್ಯೆ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ ಜೋರಾಗಿದೆ. ಜೆಡಿಎಸ್ ಕೋಟಾದ 2 ಹಾಗೂ ಕಾಂಗ್ರೆಸ್ ಕೋಟಾದ 1 ಸ್ಥಾನ ಖಾಲಿ ಇದ್ದು, ಮೂವರಿಗೆ ಅವಕಾಶವಿದೆ. ಈಗಿನ ಮಾಹಿತಿ ಪ್ರಕಾರ ಇಬ್ಬರು ಪಕ್ಷೇತರರಿಗೆ ಹಾಗೂ ಕಾಂಗ್ರೆಸ್ ನ ಒಬ್ಬರಿಗೆ ಸಚಿವಸ್ಥಾನ ನೀಡಲಾಗುತ್ತದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button