Karnataka News

*ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇಂದು ಕೂಡ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಗುಡುಗು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ.

Home add -Advt

ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಕೊಡಗು, ಚಾಮರಾಜನಗರ, ಹಾಸನ, ದಾವಣಗೆರೆ, ತುಮಕೂರು, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ಯಾದಗಿರಿ, ವಿಜಯಪುರ, ರಾಯಚೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button