*ಕೋವಿಡ್ ನಿಯಂತ್ರಣಕ್ಕೆ ಸಂಪುಟ ಉಪಸಮಿತಿ ರಚನೆ*

ಪ್ರಗತಿವಾಹಿನಿ ಸುದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೋವಿಡ್ ನಿರ್ವಹಣೆಗೆ ರಾಜ್ಯ ಸರ್ಕಾರ ಸಂಪುಟ ಉಪಸಮಿತಿ ರಚನೆ ಮಾಡಿದೆ.ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮೂರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚನೆ ಮಡಲಾಗಿದೆ. ಸಚಿವರಾದ ಹೆಚ್.ಸಿ.ಮಹದೇವಪ್ಪ, ಶರಣ ಪ್ರಕಾಶ್ ಪಾಟೀಲ್, ಎಂ.ಸಿ.ಸುಧಾಕರ್ ಉಪಸಮಿತಿ ಸದಸ್ಯರಾಗಿದ್ದಾರೆ. ಸಂಪುಟ ಉಪಸಮಿತಿ ಕೋವಿಡ್ ಸೇರಿದಂತೆ ಸಾಂಕ್ರಾಮಿಕ ರೋಗಗಳ ಬಗ್ಗೆ ಪರಾಮರ್ಶೆ ನಡೆಸಲಿದೆ. *ಎಲ್ಲಾ ಜಿಲ್ಲೆಗಳಲ್ಲೂ ಕ್ಯಾನ್ಸರ್ ಆಸ್ಪತ್ರೆ ಆರಂಭಿಸುವ ಅಗತ್ಯವಿದೆ: ಸಿ.ಎಂ.ಸಿದ್ದರಾಮಯ್ಯ*