
ಪ್ರಗತಿವಾಹಿನಿ ಸುದ್ದಿ: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿ ಹೋಗುತ್ತಿದ್ದ ಮೂವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಸೀಮಿಕೇರಿ ಬೈಪಾಸ್ ನಲ್ಲಿ ಈ ಅಪಘಾತ ಸಂಭವಿಸಿದೆ. ಮೃತ ಮೂವರು ಬಾಲಕರು ಎಂದು ತಿಳಿದುಬಂದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಬೈಕ್ ತೆರಳುತ್ತಿತ್ತು. ಈ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಕಲಾದಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.