Kannada NewsKarnataka NewsLatest

*ಮತ್ತೊಂದು ಭೀಕರ ಅಪಘಾತ; 7 ಜನರ ಮೇಲೆ ಹರಿದು ಹೋದ ಕಾರು*

ಪ್ರಗತಿವಾಹಿನಿ ಸುದ್ದಿ: ರಸ್ತೆ ಬದಿ ವಿಶ್ರಾಂತಿ ಪದೆಯುತ್ತಿದ್ದ ಕಾರ್ಮಿಕರ ಮೇಲೆ ಕಾರೊಂದು ಹರಿದ ಪರಿಣಾಮ 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಸ್ತೆಯ ಹಿಪ್ನಳ್ಳಿ ಕ್ರಾಸ್ ಬಳಿ ನಡೆದಿದೆ.

ಓರ್ವ ಮಗು ಸೇರಿ 7 ಜನರಿಗೆ ಗಯಗಳಾಗಿದ್ದು, ಮಗು ಹಾಗೂ ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳು ಹೈದರಾಬಾದ್ ನ ಮೆಹಬೂಬ್ ನಗರದವರು. ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸ್ತೆ ಕೆಲಸಕ್ಕಾಗಿ ಆಗಮಿಸಿದ್ದ ಕಾರ್ಮಿಕರು ಊಟ ಮಾಡಿ ರಸ್ತೆ ಬದಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಕಾರ್ಮಿಕರ ಮೇಲೆ ಹರಿದು ಹೋಗಿದೆ. ಶಿರಸಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button