Latest

ಪ್ರತಿಭಟನೆಗೆ ಮುಂದಾದ ರೈತರು ಪೊಲೀಸ್ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಮಳೆಯಿಂದಾಗಿ ಜಲಾಶಯಗಲು ಭರ್ತಿಯಾಗಿದ್ದು, ಇಂದು ಸಿಎಂ ಬಿ ಎಸ್ ಯಡಿಯೂರಪ್ಪ ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್​ಎಸ್​ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ.

ಕೃಷ್ಣರಾಜಸಾಗರ ಅಣೆಕಟ್ಟೆಗೆ ಆಗಮಿಸಿದ ಯಡಿಯೂರಪ್ಪ, ಕಾವೇರಿ ನದಿಗೆ ಬಾಗಿನ ಅರ್ಪಣೆ ಮಾಡಿದರು. ಈ ವೇಳೆ ಸಂಸದರಾದ ಸುಮಲತಾ, ಪ್ರತಾಪ್ ಸಿಂಹ, ಸಚಿವ ರಮೇಶ್ ಜಾರಕಿಹೊಳಿ ಮೊದಲಾದವರು ಉಪಸ್ಥಿತರಿದ್ದರು.

ಕೊರೊನಾ ಸಂದರ್ಭದಲ್ಲಿ ಕೆ ಆರ್ ಎಸ್ ಗೆ ಬಾಗೀನ ಸಮರ್ಪಣೆಗೆ ಆಗಮಿಸಿದ ಸಿಎಂ ಯಡಿಯೂರಪ್ಪನವರಿಗೆ ಪ್ರತಿಭಟನೆಯೂ ವ್ಯಕ್ತವಾಯಿತು. ಜನರು, ಅಧಿಕಾರಿಗಳು, ಜನಪ್ರತಿನಿಧಿಗಳು ಕೊರೊನಾ ಸೋಂಕಿನಿಂದ ಬಳಲುತ್ತಿರುವ ಈ ಸಂದರ್ಭದಲ್ಲಿ ಸಿಎಂ ಬಾಗೀನ ಸಮರ್ಪಿಸುವ ಕಾರ್ಯಕ್ರಮ ರದ್ದು ಮಾಡಬೇಕು ಎಂದು ಒತ್ತಾಯಿಸಿ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಹಲವು ರೈತರನ್ನು ಪೊಲೀಸರು ವಶಕ್ಕೆ ಪದೆದುಕೊಂಡ ಘಟನೆಯೂ ನಡೆದಿದೆ.

Home add -Advt

Related Articles

Back to top button