Kannada NewsKarnataka NewsLatest

*ಕಾರು ಅಪಘಾತ: ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ ಡಿಎಆರ್ ಪೊಲೀಸ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನ್ಯಾಮತಿ ಬಳಿಯ ದಾನಿಹಳ್ಳಿಯಲ್ಲಿ ನಡೆದಿದೆ.

34 ವರ್ಷದ ಸಿದ್ದೇಶ್ ಮೃತರು. ದಾವಣಗೆರೆಯ ಡಿಎಆರ್ ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಾರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.

Home add -Advt

ದಾವಣಗೆರೆಯಿಂದ ಮಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಾಲಕ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಿದ್ದೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.


Related Articles

Back to top button