Latest

*ಪೋರ್ಶೆ ಕಾರು ಅಪಘಾತ; ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಪೋರ್ಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಇನ್ಸ್ ಪೆಕ್ಟರ್ ರಾಹುಲ್ ಜಗದಾಳೆ ಹಾಗೂ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ವಿಶ್ವನಾಥ್ ತೋಡ್ಕರಿ ಅಮಾನತುಗೊಂಡ ಪೊಲೀಸ್ ಅಧಿಕಾರಿಗಳು. ಇಬ್ಬರೂ ಯರವಾಡ ಪೊಲೀಸ್ ಠಾಣೆಯವರಾಗಿದ್ದಾರೆ.

ಕಾರು ಅಪಘಾತ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದಲ್ಲಿ ಇಬ್ಬರು ಪೊಲೀಸಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮನೋಜ್ ಪಾಟೀಲ್ ತಿಳಿಸಿದ್ದಾರೆ.

ಅಪ್ರಾಪ್ತನೋರ್ವ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಇಬ್ಬರು ಇಂಜಿನಿಯರ್ ಗಳ ಸಾವಿಗೆ ಕಾರಣನಾಗಿದ್ದ. ಪುಣೆಯ ಕಲ್ಯಾಣಿನಗರದಲ್ಲಿ ಈ ಘಟನೆ ನಡೆದಿತ್ತು. ಪ್ರಕರಣ ಖಂಡಿಸಿ ಪ್ರತಿಭಟನೆಗಳು ತೀವ್ರಗೊಂಡಿದ್ದವು. ಅಪಘಾತ ಪ್ರಕರಣ ದಾಖಲಿಸಿಕೊಳ್ಳುವಾಗ ಪೊಲೀಸರ ಲೋಪದೋಷ ಕಂಡುಬಂದಿದೆ ಎಂದು ಪುಣೆ ಪೊಲೀಸ್ ಕಮಿಷ್ನರ್ ಅಮಿತೇಶ್ ಕುಮಾರ್ ತಿಳಿಸಿದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button