Belagavi NewsBelgaum NewsKannada NewsKarnataka News

*ಮರಕ್ಕೆ ಕಾರು ಡಿಕ್ಕಿ: ಬೆಳಗಾವಿಯ ಇಬ್ಬರು ಯುವಕರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ, ಓರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ  ಬೆಳಗಾವಿ-ಬಾಗಲಕೋಟೆ ಮುಖ್ಯ ರಸ್ತೆಯ ಸೋಮನಟ್ಟಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.‌ 

ಸ್ವಿಫ್ಟ್ ಡಿಸೈರ್ ಕಾರು ಯರಗಟ್ಟಿ ಕಡೆಯಿಂದ ಬೆಳಗಾವಿ ಕಡೆ ತೆರಳುವಾಗ ಸೋಮನಟ್ಟಿ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಯಾಗಿ ಈ ದುರ್ಘಟನೆ ಸಂಭವಿಸಿದೆ

ಈ ಅಪಘಾತದಲ್ಲಿ ಬೆಳಗಾವಿ ತಾಲೂಕಿನ ಕರಿಕಟ್ಟಿ ಗ್ರಾಮದ ಯುವಕ ಸಚಿನ್ ಯಲ್ಲಪ್ಪ ಬೋರಿಮರದ  (21) ಹಾಗೂ ಬಾಲಕೃಷ್ಣ ಬಸಪ್ಪ ಸುಲದಾಳ (19) ಮೃತರು. ಲಕ್ಕಪ್ಪ ಯಲ್ಲಪ್ಪ ಬೋರಿಮರದ (23) ಗಾಯಗೊಂಡಿದ್ದು, ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

Home add -Advt

ಘಟನಾ ಸ್ಥಳಕ್ಕೆ ಡಿ ವೈ ಎಸ್ ಪಿ ಡಾ.ವೀರಯ್ಯ ಹಿರೇಮಠ, ಪಿ ಐ ಗಜಾನನ ನಾಯ್ಕ, ಪಿ ಎಸ್ ಐ ಈರಪ್ಪ ರಿತ್ತಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದರು. 

ಗಾಯಳುಗಳನ್ನು ಆಸ್ಪತ್ರೆ ಗೆ ಸಾಗಿಸುವಲ್ಲಿ ಪೊಲೀಸರು ಹಾಗೂ ಗ್ರಾಮಸ್ಥರು  ನೇರವಾದರು. ನೇಸರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related Articles

Back to top button